ಮಂಗಳವಾರ, ನವೆಂಬರ್ 9, 2010

ನೀ ಸಿಗದೆ ಬಾಳೊಂದು ಬಾಳೆ?

ನೀ ಸಿಗದೆ ಬಾಳೊಂದು ಬಾಳೆ ಕೃಷ್ಣಾ
ನಾ ತಾಳಲಾರೆ ಈ ವಿರಹತೃಷ್ಣಾ

ಕಮಲವಿಲ್ಲದ ಕೆರೆ ನನ್ನ ಬಾಳು ;
ಚಂದ್ರ ಇಲ್ಲದ ರಾತ್ರಿ ಬೀಳು ಬೀಳು ;
ನೀ ಸಿಗದೆ ಉರಿ ಉರಿ ಕಳೆದೆ ಇರುಳ
ಮಾತಿಲ್ಲ, ಬಿಗಿದಿದೆ ದುಃಖ ಕೊರಳ

ಅನ್ನ ಸೇರದು, ನಿದ್ದೆ ಬಂದುದೆಂದು?
ಕುದಿವೆ ಒಂದೇ ಸಮ ಕೃಷ್ಣಾ ಎಂದು ;
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ

ಒಳಗಿರುವ ಗಿರಿಧರನೆ ಹೊರಗೆ ಬಾರೊ,
ಕಣ್ಣೆದುರು ನಿಂತು ಆ ರೂಪ ತೋರೊ ;
ಜನುಮ ಜನುಮದ ರಾಗ ನನ್ನ ಪ್ರೀತಿ,
ನಿನ್ನೊಳಗೆ ಹರಿವುದೇ ಅದರ ರೀತಿ.

                                                                  - ಡಾll ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ


ಕಾಮೆಂಟ್‌ಗಳಿಲ್ಲ: