ಬುಧವಾರ, ಮೇ 11, 2011

ಹೂವಿನ ಕೋರಿಕೆ

ಹೃದಯ ಕಮಲದಿ ಮಧುರ ಪ್ರೇಮ ಮಕರಂದವಿದೆ,
ಅಧರ ಚುಂಬನದಿಂದೆ ಸವಿಯದನು ಬಾ.
ಚಂಚಲತೆ ಏಕೆ, ಓ ಚಂಚರೀಕವೆ, ನಿನಗೆ?
ವಂಚನೆಯದಿನಿತಿಲ್ಲ; ಬಾ, ಬೇಗ ಬಾ!

ಇರುಳೆಲ್ಲ ತಪಗೈದು ಎದೆಯ ಹೊಂಬಟ್ಟಲಲಿ,
ಅರುಣನುದಯಕೆ ನೀನು ಬರುವೆಯೆಂದು,
ಪ್ರಣಯ ರಸವನೆ ಎರೆದು, ಕಾದಿಹೆನು ತುಟಿ ತೆರೆದು,
ಪಾನಗೈ, ಓ ನನ್ನ ಭ್ರಮರ ಬಂಧು!

                                    - ಕುವೆಂಪು
                                   ' ಪ್ರೇಮ ಕಾಶ್ಮೀರ '

ಕಾಮೆಂಟ್‌ಗಳಿಲ್ಲ: